ರಾಮನಗರ, ಫೆ. 06 ವಿಧವೆಯರಿಗೆ, ನಿರ್ಗತಿಕ ಹೆಣ್ಣು ಮಕ್ಕಳಿಗೆ, ಶಿಕ್ಷೆಗೆ ಒಳಗಾದ ಮಹಿಳೆಯರಿಗೆ, ಅಲೆಮಾರಿ ಮಹಿಳೆಯರಿಗೆ, ಪರಿತ್ಯಕ್ತರಿಗೆ ಸ್ವಾದಾರ್ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಿ ವೃತ್ತಿಪರ ತರಬೇತಿಯನ್ನು ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ತಿಳಿಸಿದರು.
ಅವರು ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಮನಗರದ ವಡೇರಹಳ್ಳಿಯ ಸ್ಪೂರ್ತಿನಗರದಲ್ಲಿ ಧ್ವನಿ ಗ್ರಾಮೀಣಾಭಿವೃದ್ದಿ ಸ್ವಾಧಾರ ಸಂಸ್ಥೆಯಲ್ಲಿ 30 ಮಹಿಳೆಯರು ಹಾಗೂ 09 ಮಕ್ಕಳು ಒಳಗೊಂಡAತೆ ಪ್ರಸ್ತುತ 39 ಫಲಾನುಭವಿಗಳು ಆಶ್ರಯ ಪಡೆದುಕೊಳ್ಳುತ್ತಿದ್ದಾರೆ, ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ರಕ್ಷಣೆ ನೀಡುವುದು, ಕಾನೂನು ಸೌಲಭ್ಯ ಒದಗಿಸುವುದು, ರಕ್ಷಣಾಧಿಕಾರಿಗಳ ಮುಖಾಂತರ ದೂರನ್ನು ದಾಖಲಿಸುವುದು, ನ್ಯಾಯಾಲಯದ ಮುಖಾಂತರ ಪರಿಹಾರ ಒದಗಿಸುವುದು ಅದರ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ನಿಯಮ-2008ರ ಪ್ರಕಾರ ಹೆಣ್ಣು ಮಗುವಿಗೆ 18 ವರ್ಷ ಹಾಗೂ ಗಂಡು ಮಗುವಿಗೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿಗೆ ಮದುವೆ ಮಾಡಿದರೆ ಶಿಕ್ಷಾರ್ಹ ಅಪರಾಧ. ಈ ಕಾಯ್ದೆಯನ್ನು 2008 ಮತ್ತು 2014ರಲ್ಲಿ ತಿದ್ದುಪಡಿ ನಿಯಮಗಳನ್ನು ಮಾಡಿದ್ದು ಅದರನ್ವಯ ಬಾಲ್ಯವಿವಾಹ ಪ್ರಕರಣದಲ್ಲಿ ಭಾಗಿಯಾದವರಿಗೆ 2 ವರ್ಷಗಳ ಜೈಲುವಾಸ ಮತ್ತು 1 ಲಕ್ಷ ರೂ.ಗಳ ದಂಡ ವಿಧಿಸಬಹುದಾಗಿದೆ ಎಂದರು.
ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ನೊಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ನೆರವು ನೀಡಲಾಗುತ್ತಿದೆ, ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಕಾನೂನು ನೆರವು, ಆಪ್ತ ಸಮಾಲೋಚನೆ, ಪುನರ್ವಸತಿಯನ್ನು ಕಲ್ಪಿಸಿಕೊಡುವುದು ಸಖಿ ಕೇಂದ್ರದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.
¸ ಹಾರೋಹಳ್ಳಿಯ ರುಡ್ಸೆಟ್ ಕೇಂದ್ರದಿAದ ಇನ್ನು ಮುಂದೆ ಸ್ವಾದಾರ ಯೋಜನೆಯಡಿ ತರಬೇತಿಗಳನ್ನು ನೀಡುವಂತೆ ತಿಳಿಸಿದ ಅವರು, ಕೌಟುಂಬಿಕ ಹಿಂಸೆಯಿAದ ಬಂದAತಹ ಮಹಿಳೆಯರಿಗೆ ಆಪ್ತ ಸಮಾಲೋಚನೆಯ ಮೂಲಕ 3 ವಾರಗಳಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸುವುದು. ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ಸಹಾಯ ಪಡೆಯುವಂತೆ ಸಹಾಯವಾಣಿ ಸಂಖ್ಯೆ 181 ಅನ್ನು ಜಿಲ್ಲೆಯಲ್ಲಿಯೇ ತೆರೆಯಲು ಕ್ರಮವಹಿಸುವಂತೆ ಹಾಗೂ ಬಾಲ್ಯ ವಿವಾಹ ಪತ್ತೆ ಹಚ್ಚಲು ಜಿಲ್ಲೆಯಲ್ಲಿರುವ ಕಲ್ಯಾಣ ಮಂಟಪಗಳು ಹಾಗೂ ನೋಂದಣಾಧಿಕಾರಿಗಳಿAದ ಮದುವೆ ಆದ ಬಗ್ಗೆ ಮಾಹಿತಿಯನ್ನು ಪಡೆಯುವುದು. ಜಿಲ್ಲೆಯಲ್ಲಿ ಒಟ್ಟು 12 ಲಕ್ಷ ಜನ ಸಂಖ್ಯೆ ಇರುವುದರಿಂದ ಬಾಲ್ಯ ವಿವಾಹ ತಡೆಗೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಸವರಾಜು, ವಿಕಲಚೇತನರ ಕಲ್ಯಾಣಾಧಿಕಾರಿ ನಾಗವೇಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಸನ್ನ ಕುಮಾರ್, ಸುರೇಂದ್ರ, ಕಾಂತರಾಜು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.